ಕ್ಷೇತ್ರದಲ್ಲಿ ಎಷ್ಟು ಲಿಂಗಾಯತ ನಾಯಕರನ್ನು ಬೆಳೆಸಿದ್ದಾರೆ: ಎ.ಮಂಜುಗೆ ಪ್ರಜ್ವಲ್ ರೇವಣ್ಣ ಪ್ರಶ್ನೆ?

ಬಿಜೆಪಿ ಅಭ್ಯರ್ಥಿ ಹಾಸನ ಕ್ಷೇತ್ರದಲ್ಲಿ ಎಷ್ಟು ಮಂದಿ ಲಿಂಗಾಯತ ಮುಖಂಡರನ್ನು ಬೆಳೆಸಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದ್ದಾರೆ....
ಎ.ಮಂಜು ಮತ್ತು ಪ್ರಜ್ವಲ್ ರೇವಣ್ಣ
ಎ.ಮಂಜು ಮತ್ತು ಪ್ರಜ್ವಲ್ ರೇವಣ್ಣ
Updated on
ಹಾಸನ: ಬಿಜೆಪಿ ಅಭ್ಯರ್ಥಿ ಹಾಸನ ಕ್ಷೇತ್ರದಲ್ಲಿ ಎಷ್ಟು ಮಂದಿ ಲಿಂಗಾಯತ ಮುಖಂಡರನ್ನು ಬೆಳೆಸಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದ್ದಾರೆ.
ಹಾಸನದಲ್ಲಿ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಜ್ವಲ್ ರೇವಣ್ಣ, ವಿದಾನಸಭೆ ಚುನಾವಣೆ ನಂತರ ಕ್ಷೇತ್ರಕ್ಕೆ ಭೇಟಿ ನೀಡಿರಲಿಲ್ಲ, ಈಗ ಮತ್ತೆ ಚುನಾವಣೆಗಾಗಿ ಬಂದಿದ್ದಾರೆ, ಅವರು ಸಚಿವರಾಗಿದ್ದಾಗ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ನಾನು ಮೊದಲು ಸುವರ್ಣ ಹಾಸನ ಮಾಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ ಅವರು, ಬಿಜೆಪಿಯವರು ಎ.ಮಂಜುಗೆ ಮತ ನೀಡಿ ಎಂದು ಕೇಳುತ್ತಿಲ್ಲ, ಬದಲಿಗೆ  ಮೋದಿಗೆ ಮತ ನೀಡಿ ಎಂದು ಕೇಳುತ್ತಿದ್ದಾರೆ, ಅವರಿಗೆ ಎ.ಮಂಜು ಮೇಲೆ ನಂಬಿಕೆಯಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com