ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರು ಮಾತನಾಡಿದ್ದು, ಖುಷ್ಬೂ ಅವರೊಂದಿಗೆ ಆತ ಅಸಭ್ಯವಾಗಿ ವರ್ತಿಸಿದ್ದರಿಂದಲೇ ಅವರು ಕಪಾಳಕ್ಕೆ ಹೊಡೆದಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ನಾನು ಖುಷ್ಬೂ ಅವರಿಗೆ ಕರೆ ಮಾಡಿ ಮಾತನಾಡಿದ್ದು, ಆತ ಅನುಚಿತವಾಗಿ ವರ್ತಿಸಿದ. ಹೀಗಾಗಿ ಹೊಡೆದೆ ಎಂದು ಖುಷ್ಬೂ ಅವರು ಹೇಳಿದ್ದಾರೆ ಎಂದು ರಿಜ್ವಾನ್ ಅರ್ಷದ್ ಹೇಳಿದ್ದಾರೆ.