ಮಂಡ್ಯ: ಸಚಿವ ಸಿ.ಎಸ್ ಪುಟ್ಟರಾಜು ಮತ್ತು ಮಾಜಿ ಸಂಸದ ಜಿ.ಮಾದೇಗೌಡ ವಿರುದ್ಧ ಎಫ್ಐಆರ್ ದಾಖಲು

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ. ಮಾದೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ...
ಜಿ.ಮಾದೇಗೌಡ ಮತ್ತು ಪುಟ್ಟರಾಜು
ಜಿ.ಮಾದೇಗೌಡ ಮತ್ತು ಪುಟ್ಟರಾಜು
Updated on
ಮಂಡ್ಯ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ. ಮಾದೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ವಿರುದ್ಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ದಾಖಲಾಗಿದೆ.
ಚುನಾವಣಾ ಖರ್ಚಿಗಾಗಿ ಹಣದ ಬೇಡಿಕೆ ಇಟ್ಟಿದ್ದ ಸಂಬಂಧ ಚುನಾವಣಾಧಿಕಾರಿ ಜಗದೀಶ್ ದೂರು ಆಧರಿಸಿ ಐಪಿಸಿ ಸೆಕ್ಷನ್ 171(ಇ)ರ ಅಡಿಯಲ್ಲಿ ಎಫ್​ಐಆರ್​ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣವನ್ನು ಚುನಾವಣಾ ಆಯೋಗಕ್ಕೆ ವರ್ಗಾಯಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ವ್ಯಕ್ತಪಡಿಸಿರುವ ಜಿ.ಮಾದೇಗೌಡ, ವ್ಯಕ್ತಿಯೊಬ್ಬರ ಮೊಬೈಲ್ ನಿಂದ ಸಚಿವರ ಮೊಬೈಲ್​ಗೆ ಕರೆ ಮಾಡಿಸಿ ಚುನಾವಣೆ ಮಾಡಲು ಹಣ ಕಳಿಸಿಕೊಡುವಂತೆ ಸೂಚಿಸಿದ್ದಾರೆ. ಅದಕ್ಕೆ ಸಚಿವರು ಹಣದ ವ್ಯವಸ್ಥೆ ಮಾಡುವುದಾಗಿ ಉತ್ತರಿಸಿದ್ದರು.
ಈ ಆಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಈಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿದೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆರ್.ಟಿ.ಐ. ಕಾರ್ಯಕರ್ತ ರವೀಂದ್ರ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು. ಇವರ ದೂರನ್ನು ಆಧರಿಸಿ ಚುನಾವಣಾಧಿಕಾರಿಗಳು ಪೊಲೀಸ್​ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com