ಮಂಡ್ಯದಲ್ಲಿ ನಿಖಿಲ್ ಹಣ ಹಂಚುವ ದೃಶ್ಯ ಕ್ಯಾಮರಾದಲ್ಲಿ ಸೆರೆ: ಜೆಡಿಎಸ್ ಹೇಳಿದ್ದೇನು?

ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಣ ಹಂಚುತ್ತಿರುವ ದೃಶ್ಯ ...
ಹಣ ಹಂಚುತ್ತಿರುವಾಗ ಕ್ಯಾಮರಾದಲ್ಲಿ ಸೆರೆಯಾದ ನಿಖಿಲ್ ಕುಮಾರಸ್ವಾಮಿ
ಹಣ ಹಂಚುತ್ತಿರುವಾಗ ಕ್ಯಾಮರಾದಲ್ಲಿ ಸೆರೆಯಾದ ನಿಖಿಲ್ ಕುಮಾರಸ್ವಾಮಿ
Updated on
ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಣ ಹಂಚುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
ವಿಡಿಯೊದಲ್ಲಿ ನಿಖಿಲ್ ಕುಮಾರಸ್ವಾಮಿ 500 ರೂಪಾಯಿ ನೋಟುಗಳನ್ನು ಹಿಡಿದುಕೊಂಡು ಎಣಿಸುತ್ತಾ ವ್ಯಕ್ತಿಗೆ ನೀಡಲು ಮುಂದಾಗಿರುವುದು ಸೆರೆಯಾಗಿದೆ.
ಆದರೆ ಈ ಬಗ್ಗೆ ಜೆಡಿಎಸ್ ಸ್ಪಷ್ಟನೆ ನೀಡಿದ್ದು ನಿಖಿಲ್ ಕುಮಾರಸ್ವಾಮಿ ತಮ್ಮ ಖಾಸಗಿ ಸಹಾಯಕನಿಗೆ ಹಣ ನೀಡಿದ್ದರು ಎಂದು ಹೇಳಿದೆ. ಮಂಡ್ಯ ಜನತೆ ನಿಖಿಲ್ ಪ್ರಚಾರಕ್ಕೆ ಹಣ ನೀಡುತ್ತಿದ್ದು ಹಣವನ್ನು ಗ್ರಾಮಸ್ಥರೇ ದಾನವಾಗಿ ನೀಡಿದ್ದಾರೆ. ಮಂಡ್ಯದ ಅನೇಕ ಗ್ರಾಮಗಳಲ್ಲಿ ಜನರು ಹಣ ಸಂಗ್ರಹಿಸಿ ತಮ್ಮ ನೆಚ್ಚಿನ ಅಭ್ಯರ್ಥಿಗೆ ನೀಡುತ್ತಿದ್ದಾರೆ ಎಂದು ಜೆಡಿಎಸ್ ವಿಡಿಯೊದ ಬಗ್ಗೆ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದೆ.
ಮಂಡ್ಯದ ದಡಮಹಳ್ಳಿಯ ಜನರು ನಿಖಿಲ್ ಗೆ ನಿನ್ನೆ ದೇಣಿಗೆಯಾಗಿ ಚುನಾವಣೆ ಖರ್ಚಿಗೆ ಹಣ ನೀಡಿದ್ದನ್ನು ನಿಖಿಲ್ ಪಡೆದುಕೊಂಡು ತಮ್ಮ ಕಾರ್ಯದರ್ಶಿಗೆ ನೀಡಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಜೆಡಿಎಸ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com