ತುಮಕೂರು ಕ್ಷೇತ್ರದಲ್ಲಿ ದೇವೇಗೌಡರ ಪರ ಪ್ರಚಾರ ನಡೆಸಿದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮಾತನಾಡಿ, ದೇವಗೌಡರು ಈ ಬಾರಿ ಚುನಾವಣೆಗೆ ಸ್ಪರ್ಧಿಸಬಾರದೆಂಬ ಅಭಿಪ್ರಾಯಕ್ಕೆ ಬಂದಿದ್ದರಾದರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ನಾಯಕಿ ಸೋನಿಯಾ ಗಾಂಧಿ ಅವರ ಒತ್ತಾಯದ ಮೇರೆಗೆ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. 60 ವರ್ಷಗಳ ಕಾಲ ಸುಧೀರ್ಘ ರಾಜಕಾರಣ ಮಾಡಿರುವ ಅವರು ಗ್ರಾಮ, ತಾಲೂಕು ಅಭಿವೃದ್ಧಿ ಮಂಡಳಿಗಳಿಗೆ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. ರಾಜ್ಯದ ನೆಲ, ಜಲದ ಬಗ್ಗೆ ಹೋರಾಟ ಮಾಡಿಕೊಂಡು ಬಂದಿರುವ ರಾಜಕಾರಣಿ ದೇವೇಗೌಡರು ಎಂದರು.