ಯಡಿಯೂರಪ್ಪ ಆಪ್ತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಕಾಂಗ್ರೆಸ್ ಸೇರ್ಪಡೆ

ಮಾಜಿ ಶಾಸಕ, ಗದಗ ಜಿಲ್ಲೆಯ ಪ್ರಭಾವಿ ಲಿಂಗಾಯತ ಸಮುದಾಯದ ಮುಖಂಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್‍ ಸೇರ್ಪಡೆಯಾಗಿದ್ದಾರೆ.
ಶ್ರೀಶೈಲಪ್ಪ ಬಿದರೂರು
ಶ್ರೀಶೈಲಪ್ಪ ಬಿದರೂರು
ಗದಗ: ಮಾಜಿ ಶಾಸಕ, ಗದಗ ಜಿಲ್ಲೆಯ ಪ್ರಭಾವಿ ಲಿಂಗಾಯತ ಸಮುದಾಯದ ಮುಖಂಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್‍ ಸೇರ್ಪಡೆಯಾಗಿದ್ದಾರೆ. 
ಗುರುವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಕೆ ಪಾಟೀಲ್‍ ಸಮ್ಮುಖದಲ್ಲಿ ಬಿದರೂರು ಕಾಂಗ್ರೆಸ್ ಸೇರ್ಪಡೆಗೊಂಡರು. ಹಾವೇರಿ ಕಾಂಗ್ರೆಸ್ ಅಭ್ಯರ್ಥಿ ಡಿ ಆರ್ ಪಾಟೀಲ್ ಗೆಲ್ಲಿಸಲು ಹೆಚ್ ಕೆ ಪಾಟೀಲ್  ಪಣ ತೊಟ್ಟಿದ್ದು, ಇದರ ಭಾಗವಾಗಿ ಬಿದರೂರು ಅವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಅವರು ಯಶಸ್ವಿಯಾಗಿದ್ದಾರೆ. 
ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶ್ರೀಶೈಲಪ್ಪ ಬಿದರೂರು ಭೇಟಿಯಾಗಿ ಚರ್ಚಿಸಿದ್ದರು. 2008ರಲ್ಲಿ ಗದಗ ವಿಧಾನಸಭಾ ಕ್ಷೇತ್ರದಿಂದ ಶ್ರೀಶೈಲಪ್ಪ ಬಿದರೂರು ಬಿಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಎಚ್‍.ಕೆ.ಪಾಟೀಲ್‍ ಅವರನ್ನು ಮಣಿಸಿ ಆಯ್ಕೆಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com