ಕಲಬುರಗಿ ಜಿಲ್ಲೆ ಸೇಡಂ ತಾಲೂಕು ಮುಧೋಳದಲ್ಲಿ ಬಿಜೆಪಿಯ ದಲಿತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ರತ್ನಪ್ರಭಾ "ರಾಜ್ಯದಲ್ಲಿನ ಸರ್ಕಾರ ದಲಿತರ ಪರ ಕೇವಲ ತೋರಿಕೆಯ ರಾಜಕಾರಣ ಮಾಡುತ್ತಾ ಬಂದಿದೆ ನಾನೊಬ್ಬ ದಲಿತೆ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ತುಳಿಯಲಾಗಿದೆ, 2014ರಲ್ಲೇ ನಾನು ಮುಖ್ಯ ಕಾರ್ಯದರ್ಶಿಯಾಗಬೇಕಾಗಿತ್ತು. ಆದರೆ ನನಗೆ ಮೋಸ ಮಾಡಲಾಗಿದೆ, ಕಾಟಾಚಾರಕ್ಕೆ ಎಂಬಂತೆ ಚುನಾವಣೆಗೆ ನಾಲ್ಕು ತಿಂಗಳಿದೆ ಎನ್ನುವಾಗ ನನ್ನನ್ನು ಸಿಎಸ್ ಸ್ಥಾನದಲ್ಲಿ ಕೂರಿಸಲಾಗಿತ್ತು" ಅವರು ಹೇಳಿದ್ದಾರೆ.