ಬಳಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಸೇರುವ ಮೂರು ದಿನ ಮೊದಲು ನನ್ನೊಂದಿಗೆ ಭೇಟಿ ಮಾಡಿ ಪಕ್ಷ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ನೀವು ನನಗೆ ಸಚಿವ ಸ್ಥಾನ ನೀಡಿದವರು ಎಂದು ಮಾತುಕೊಟ್ಟು, ಈಗ ಬಿಜೆಪಿ ಸೇರಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾನೆ ಎಂದು ಮಂಜು ವಿರುದ್ಧ ಸಿದ್ದರಾಮಯ್ಯ ಏಕವಚನದಲ್ಲಿ ಚಾಟಿ ಬೀಸಿದರು.