ಮಂಡ್ಯ: ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ಗೆ ಬೆಂಬಲ ನೀಡಿದ್ದಾರೆ. ನೊದೆಕೊಪ್ಪಲು ಗ್ರಾಮದಲ್ಲಿನ ಅವರ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ಮಾಡಿ, ಗಡ್ಡಪ್ಪ ಅವರನ್ನು ಸನ್ಮಾನಿಸುವ ಮೂಲಕ ಸುಮಲತಾಗೆ ವೋಟು ಹಾಕುವಂತೆ ಮನವಿ ಮಾಡಿದರು.
ದರ್ಶನ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗಡ್ಡಪ್ಪ, ದರ್ಶನ್ ಭೇಟಿ ಮಾಡಿದ್ದು ಬಹಳ ಸಂತೋಷ ಆಗಿದೆ. ಸುಮಲತಾ ಪರ ಮತ ಹಾಕಲು ಹೇಳಿದ್ರು, ನಾನು ಸುಮಲತಾ ಅವರಿಗೆ ಮತ ಹಾಕೋದು ಎಂದು ಸ್ಪಷ್ಪಪಡಿಸಿದರು.
Advertisement