ಬೆಂಗಳೂರು: ಐಟಿ ಇಲಾಖೆ ಅಧಿಕಾರಿಗಳ ದಾಳಿಯಿಂದ ನನಗೇನು ಭಯವಿಲ್ಲ, ನನಗೆ ಭಯವಿಲ್ಲದಿದ್ದರಿಂದಲೇ ನಾನು ಇಷ್ಟು ಮುಕ್ತವಾಗಿ ಬಹಿರಂಗವಾಗಿ ಮಾತನಾಡುತ್ತಿರಲಿಲ್ಲ. ಅಧಿಕಾರದಲ್ಲಿರುವವರು ಯಾರಾದರೂ ಹೀಗೆ ಮಾಡುತ್ತಾರೆಯೇ, ದೇವೇಗೌಡರು ಹಳ್ಳಿಯಲ್ಲಿ ಹೋಗಿ ಊಟ ಮಾಡಿ ಬಂದ ಮನೆಗೆ ಹೋಗಿ ಐಟಿ ದಾಳಿ ಮಾಡುತ್ತಾರೆ, ಹಾಗಾದರೆ ಇದು ಎಂಥಹ ಸರ್ಕಾರ, ಯಾವ ರೀತಿಯ ಆಡಳಿತ ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.