ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಉನ್ನತ ಮಟ್ಟದ ನಾಯಕರ ಮಧ್ಯೆ ಇರುವ ಸ್ನೇಹಪರತೆ ಮತ್ತು ಮೈತ್ರಿ ಇದೇ ರೀತಿ ಮುಂದುವರಿದರೆ ಪಕ್ಷದ ಕಾರ್ಯಕರ್ತರಿಗೆ ಸರಿಯಾದ ಸಂದೇಶ ಸಾರುತ್ತಾರೆ ಎಂದು ವಿಶ್ಲೇಷಿಸಲಾಗಿದೆ. ಆದರೆ ನಾಯಕರ ಮಧ್ಯೆ ಇರುವ ಈ ಒಗ್ಗಟ್ಟು ಮತಗಳಾಗಿ ಪರಿವರ್ತನೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲೂ ಎರಡೂ ಪಕ್ಷಗಳ ತಳಮಟ್ಟದ ಕಾರ್ಯಕರ್ತರಲ್ಲಿ ಹಾಸನ, ಮಂಡ್ಯ ಮತ್ತು ತುಮಕೂರುಗಳಲ್ಲಿ ಅಸಮಾಧಾನ ಹೊಗೆಯಾಡುತ್ತಲೇ ಇದೆ.