ನಾವು ವ್ಯಕ್ತಿ ಪೂಜೆ ಮಾಡಲ್ಲ, ಪಕ್ಷ ಪೂಜೆ ಮಾಡುತ್ತೇವೆ: ಮೋದಿ ಘೋಷಣೆಗೆ ಡಿಕೆಶಿ ಟಾಂಗ್

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಸದರ ಸಂಖ್ಯೆಯನ್ನು ಒಂದಂಕಿಗೆ ಇಳಿಸುತ್ತೇವೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್...
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್
Updated on
ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಸದರ ಸಂಖ್ಯೆಯನ್ನು ಒಂದಂಕಿಗೆ ಇಳಿಸುತ್ತೇವೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿ, ನರೇಂದ್ರ ಮೋದಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಬಿಜೆಪಿ ಕಳೆದ ಬಾರಿ ಸುಳ್ಳಿನ ಆಧಾರದಲ್ಲಿ ಸರ್ಕಾರ ರಚಿಸಿತ್ತು. ಈ ಬಾರಿ ಅದು ಸಾಧ್ಯವಿಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಗೆ ಹೆಚ್ಚು ಲಾಭವಾಗಲಿದ್ದು, ರಾಜ್ಯ 28 ಕ್ಷೇತ್ರಗಳಲ್ಲಿ ಬಿಜೆಪಿ ಒಂದಂಕಿಗಿಂತ ಹೆಚ್ಚು ಸ್ಥಾನ ಗಳಿಸಲು ಬಿಡುವುದಿಲ್ಲ ಎಂದರು.
ಇದೇ ವೇಳೆ ಸ್ಥಳೀಯ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ, 
ಜಿಲ್ಲೆಯ ಜನರು ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದಾರೆ. ಸಣ್ಣ ಯೋಜನೆಯನ್ನೂ ಜಿಲ್ಲೆಗೆ ತರಲು ನಳಿನ್ ಕುಮಾರ್ ಗೆ ಸಾಧ್ಯವಾಗಿಲ್ಲ. ಮೋದಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದರು.
ಹಿಂದೂ ಸಂಸ್ಕೃತಿ ಅರಿತುಕೊಂಡಿರುವ ಮಿಥುನ್ ರೈಗೆ ಈ ಬಾರಿ ಜಿಲ್ಲೆಯ ಜನ ಆಶೀರ್ವಾದ ಮಾಡಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ನಾವು ವ್ಯಕ್ತಿ ಪೂಜೆ ಮಾಡಲ್ಲ, ಪಕ್ಷ ಪೂಜೆ ಮಾಡುತ್ತೇವೆ ಎಂದು ಬಿಜೆಪಿಯವರ ಮೋದಿ ಘೋಷಣೆಗೆ ಟಾಂಗ್ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com