ಕೇಂದ್ರ ಸರ್ಕಾರಕ್ಕೆ ರೈತರು, ಬಡವರು ಬೇಕಿಲ್ಲ. ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಅವರು ಕೃಷಿಕರ ಸಾಲ ಮನ್ನಾ ಮಾಡುತ್ತಿದ್ದರು. ಇಷ್ಟಕ್ಕೂ ರಾಜ್ಯಕ್ಕೆ ಬಿಜೆಪಿಯ ಕೊಡುಗೆ ಏನೇನು ಇಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮೂರು ವರ್ಷ ಸಚಿವರಾಗಿ ಮಜಾ ಉಡಾಯಿಸಿದ ಬಿಜೆಪಿ ಅಭ್ಯರ್ಥಿ ಎ ಮಂಜು ತಮಗೆ ಬುದ್ದಿ ಹೇಳಲು ಬಂದಿದ್ದಾರೆ. ಬಿಜೆಪಿಯವರಿಗೆ ಬೇರೆ ಯಾರು ಅಭ್ಯರ್ಥಿಗಳು ಇರಲಿಲ್ಲವೆ?. ಟಿಕೆಟ್ ಕೊಡುವ ಮುನ್ನ ಐದು ವರ್ಷ ಪಕ್ಷಕ್ಕಾಗಿ ದುಡಿಯುವಂತೆ ಸೂಚಿಸಬೇಕಿತ್ತು. ಆದರೆ ಆತ ತಮ್ಮ ಪುತ್ರನನ್ನು 2.75 ಲಕ್ಷ ಮತಗಳ ಅಂತರದಿಂದ ಸೋಲಿಸುತ್ತೇನೆ ಎಂದು ಹೇಳುತ್ತಿದ್ದಾನೆ. ಈತನಿಂದ ದೇವೇಗೌಡ, ಕುಮಾರಸ್ವಾಮಿ ಪಾಠ ಕಲಿಯಬೇಕೆ ಎಂದು ವಾಕ್ಪ್ರಾಹಾರ ನಡೆಸಿದರು.