ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸುಡುವ ಬಿಸಿಲಿನಲ್ಲೂ ಗುಬ್ಬಿ ತಾಲೂಕಿನಲ್ಲಿ ಪ್ರಚಾರ ನಡೆಸಿದರು. ಪ್ರಚಾರ ಕೊನೆಯ ದಿನದಲ್ಲಿ ದೇವೇಗೌಡರು ತಮ್ಮ ಗೆಲುವಿನ ಬಗ್ಗೆ ಆತ್ಮ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ, ನಾನು ನನ್ನ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ, ನನ್ನನ್ನು ಯಾರು ಕಡೆಗಣಿಸುವಂತಿಲ್ಲ ಎಂದು ಹೇಳಿದ್ದಾರೆ, ಇನ್ನೂ ದೇವೇಗೌಡರ ಪರವಾಗಿ ಪ್ರಚಾರದಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಕೂಡ ಭಾಗವಹಿಸಿದ್ದರು,