ಅವರ ಸಹೋದರ ಸಚಿವ ಡಿ.ಕೆ.ಶಿವಕುಮಾರ್ ಕೂಡ ಇದೇ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿ, ಹಿಂದಿನಿಂದಲೂ ಶುದ್ಧ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಜನರು ನಮ್ಮ ಮೇಲೆ ಉಪಕಾರ ಸ್ಮರಣೆ ಇಟ್ಟುಕೊಂಡಿದ್ದಾರೆ. ಕಣ್ಣಿಗೆ ಕಾಣುವ ಅಭಿವೃದ್ಧಿ ಮಾಡಿದ್ದೇವೆ. ಜನ ನಮ್ಮನ್ನು ಕೈಬಿಡುವುದಿಲ್ಲ, ಸಹೋದರ ಡಿ.ಕೆ.ಸುರೇಶ್ ಪರವಾಗಿ ತಾವು ಪ್ರಚಾರಕ್ಕೆ ಹೋಗಿಲ್ಲ, ಇಲ್ಲಿನ ಕಾರ್ಯಕರ್ತರು, ಮುಖಂಡರೇ ಪ್ರಚಾರ ನಡೆಸಿದ್ದಾರೆ ಎಂದು ಹೇಳಿದರು.