ಕುಟುಂಬ ರಾಜಕಾರಣದಿಂದಲೇ ಈ ದೇಶ ಅಭಿವೃದ್ಧಿ ಹೊಂದಿದ್ದು: ಹೆಚ್ ಡಿ ಕುಮಾರಸ್ವಾಮಿ

ಕುಟುಂಬ ರಾಜಕಾರಣ ಈಗ ಮುಖ್ಯ ಚರ್ಚೆಯ ವಿಷಯವಲ್ಲ, ದೇಶದ ಸಮಸ್ಯೆ ಬಗ್ಗೆ ಮಾತನಾಡಿ ...
ರಾಮನಗರದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ
ರಾಮನಗರದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ
Updated on
ರಾಮನಗರ: ಕುಟುಂಬ ರಾಜಕಾರಣ ಈಗ ಮುಖ್ಯ ಚರ್ಚೆಯ ವಿಷಯವಲ್ಲ, ದೇಶದ ಸಮಸ್ಯೆ ಬಗ್ಗೆ ಮಾತನಾಡಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವುದು ಮುಖ್ಯ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಮನಗರ ಜಿಲ್ಲೆಯ ಕಾತಗಾನಹಳ್ಳಿಯಲ್ಲಿ ತಮ್ಮ ಪತ್ನಿ ಮತ್ತು ಪುತ್ರನೊಡಗೂಡಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ನಂತರ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದರು.
ನಮ್ಮ ದೇಶದಲ್ಲಿ ಕುಟುಂಬ ರಾಜಕೀಯ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳಿಂದಲೇ ಈ ದೇಶ ಹಲವು ರಾಜ್ಯಗಳಲ್ಲಿ ಪ್ರಗತಿ ಕಂಡಿದೆ ಮತ್ತು ಮುಂದೆಯೂ ಕಾಣುತ್ತದೆ. ಭಾರತೀಯ ಜನತಾ ಪಕ್ಷದ ನಾಯಕರ ಟೀಕೆಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com