ಉಮೇಶ್ ಜಾಧವ್ ಮತ್ತು ಸಿ.ಎಸ್ ಶಿವಳ್ಳಿ
ಉಮೇಶ್ ಜಾಧವ್ ಮತ್ತು ಸಿ.ಎಸ್ ಶಿವಳ್ಳಿ

ಚಿಂಚೋಳಿ, ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಧಿಸೂಚನೆ ಪ್ರಕಟ

ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಮೀಸಲು ಕ್ಷೇತ್ರ ಹಾಗೂ ಸಚಿವ ಸಿ.ಎಸ್‌.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ...
Published on
ಬೆಂಗಳೂರು: ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಮೀಸಲು ಕ್ಷೇತ್ರ ಹಾಗೂ ಸಚಿವ ಸಿ.ಎಸ್‌.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಿದೆ.
ಇದರೊಂದಿಗೆ ನಾಮಪತ್ರ ಸಲ್ಲಿಕೆ ಕಾರ್ಯವೂ ಆರಂಭವಾಗಿದೆ. ಏಪ್ರಿಲ್ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು ಏಪ್ರಿಲ್ 30 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ಮೇ 2 ನಾಮಪತ್ರ ವಾಪಸಾತಿಗೆ ಅಂತಿಮ ದಿನಾಂಕವಾಗಿರುತ್ತದೆ. ಮೇ 19 ರಂದು ಈ ಎರಡೂ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಮೇ 23 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com