ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ಸಭೆಯಲ್ಲಿ ಹಾಜರಿದ್ದು ಮೇ 19 ರ ಉಪಚುನಾವಣೆಗೆ ಜೆಡಿಎಸ್ ಸಿದ್ದತೆ ಹೇಗಿದೆ ಎಂದು ಚರ್ಚಿಸಿದ್ದಾರೆ. . ಕುಮಾರಸ್ವಾಮಿ ಕೆಲವು ಕಾಂಗ್ರೆಸ್ ಮುಖಂಡರು ನಿಧಿ ಹಂಚಿಕೆ ಬಗೆಗೆ ಅಸಮಾಧಾನಗೊಂಡಿದ್ದಾರೆ ಎಂಬುದರ ಕುರಿತಂತೆ ಮಾತ್ರವಲ್ಲದೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಹೆಚ್ಚಿನ ಹೊಂದಾಣಿಕೆ ಸಾಧ್ಯತೆ ಕುರಿತಂತೆ ಚರ್ಚಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಸಂಬಂಧ ಚರ್ಚೆ ನಡೆದಿದೆ, ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಯೋಜನೆಯ ಕುರಿತಂತೆ ಸಹ ಚರ್ಚಿಸಲಾಗಿದೆ. ಎರಡೂ ಸ್ಥಾನಗಳನ್ನು ಗೆಲ್ಲುವುದರಲ್ಲಿ ನಾವು ಭರವಸೆ ಹೊಂದಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ