ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ವರಿಷ್ಠರಿಗೆ ಕಪ್ಪ ಕಾಣಿಕೆ ಸಲ್ಲಿಸಿರುವ ಅಂಶಗಳನ್ನೊಳಗೊಂಡ ಡೈರಿಯಲ್ಲಿನ ಮಾಹಿತಿ ಅತ್ಯಂತ ಗಂಭೀರವಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ರಚಿಸಿರುವ ಲೋಕಪಾಲ್ ವ್ಯವಸ್ಥೆಯ ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಒತ್ತಾಯಿಸಿದ್ದಾರೆ.