ಅಯೋದ್ಯೆಯ ರಾಮ ಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು(ಎಐಎಂಪಿಎಲ್ಬಿ) ತನ್ನ ಕಾರ್ಯಕಾರಿಣಿ ಸಮಿತಿಯ ತುರ್ತು ಸಭೆ ಕರೆದಿದೆ. ಸಮಿತಿಯಲ್ಲಿರುವ ಎಲ್ಲ 51 ಸದಸ್ಯರೂ ಇಂದು(ಭಾನುವಾರ) ನಡೆಯಲಿರುವ ಸಭೆಗೆ ಹಾಜರಾಗುವ ನಿರೀಕ್ಷೆಯಿದೆ. ಸುನ್ನೀ ವಕ್ಫ್ ಮಂಡಳಿ ಪ್ರತಿನಿಧಿಗಳೂ ಆಗಮಿಸಲಿದ್ದಾರೆ ಎನ್ನಲಾಗಿದೆ.