ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅನಿತಾ ಕುಮಾರಸ್ವಾಮಿ; ಮಗನ ಗೆಲುವಿಗೆ ಸಹಕಾರ ಕೋರಿಕೆ?

ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕಳೆದ ರಾತ್ರಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಜಿ ...
ಅನಿತಾ ಕುಮಾರಸ್ವಾಮಿ, ಸಿದ್ದರಾಮಯ್ಯ
ಅನಿತಾ ಕುಮಾರಸ್ವಾಮಿ, ಸಿದ್ದರಾಮಯ್ಯ
Updated on
ಬೆಂಗಳೂರು: ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕಳೆದ ರಾತ್ರಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಕುತೂಹಲ ಮೂಡಿಸಿದ್ದಾರೆ.
 ಮಂಡ್ಯ ಚುನಾವಣಾ ಅಖಾಡಕ್ಕಿಳಿದಿರುವ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯವನ್ನು ಹೇಗಾದರೂ ಮಾಡಿ ಗೆಲ್ಲಿಸಲು ಹಿಂದುಳಿದ ದಲಿತ ಹಾಗೂ ಅಲ್ಪ ಸಂಖ್ಯಾತ ಮತಗಳನ್ನ ಸೆಳೆಯಲು ಸಿದ್ದರಾಮಯ್ಯ ನೆರವು ಕೋರಲು ಅನಿತಾ ಕುಮಾರಸ್ವಾಮಿ ಸಿದ್ದರಾಮಯ್ಯ ಬಳಿಗೆ ಹೋಗಿದ್ದರು ಎಂದು ಹೇಳಲಾಗುತ್ತಿದೆ.
 ನಿಖಿಲ್ ಕುಮಾರಸ್ವಾಮಿ ನಾಳೆ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದು ಈ ಸಂದರ್ಭದಲ್ಲಿ ಮಂಡ್ಯಕ್ಕೆ ಬರುವಂತೆ ಅನಿತಾ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯದಲ್ಲಿ ಈಗಾಗಲೇ ಹಲವು ಕಾಂಗ್ರೆಸ್ ಮುಖಂಡರು ಸುಮಲತಾಗೆ ಬೆಂಬಲ ನೀಡುವುದಾಗಿ ಹೇಳುತ್ತಿದ್ದು ಇದರಿಂದ ತಮ್ಮ ಮಗನ ಗೆಲುವಿಗೆ ಭಾರೀ ಹೊಡೆತ ಬೀಳಬಹುದು ಎಂದು ಅರಿತಿರುವ ಹೆಚ್ ಡಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅದನ್ನು ಸರಿಪಡಿಸಲು ಸಿದ್ದರಾಮಯ್ಯನವರ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಮೈತ್ರಿ ಧರ್ಮ ಪರಿಪಾಲನೆ ನಿಟ್ಟಿನಲ್ಲಿ ತಾವು ಸಹಕಾರ ನೀಡಬೇಕಾದ ಅನಿವಾರ್ಯತೆ ಇದೀಗ ಸಿದ್ದರಾಮಯ್ಯನವರಿಗೆ ಸಹ ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com