ಬೆಂಗಳೂರು ಉತ್ತರ ಕ್ಷೇತ್ರದಿಂದ ತಮ್ಮನ್ನು ಕಣಕ್ಕಿಳಿಸಬೇಕು ಎಂದು ಬೆಂಗಳೂರು ಉತ್ತರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಕುಮಾರ್, ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇತ್ತ, ಬಿ.ಎಲ್.ಶಂಕರ್ ಅವರನ್ನು ದೋಸ್ತಿ ಪಕ್ಷಗಳು ಒಮ್ಮತದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದು, ಇಬ್ಬರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.