ನಮ್ಮ ಅಭ್ಯರ್ಥಿಯ ಓಟಕ್ಕೆ ಬ್ರೇಕ್ ಹಾಕಲು ಕೆಲವು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ. ಹಾಗೆಂದು ಕಾಂಗ್ರೆಸ್ ಅಭ್ಯರ್ಥಿಗಳಿರುವಲ್ಲಿ ಜನತಾ ದಳ ಕಾರ್ಯಕರ್ತರು ಹಾಗೆ ಮಾಡಲು ನಾನು ಬಿಡುವುದಿಲ್ಲ. ನಮಗೆ ದೇಶ ಮುಖ್ಯ. ನಮ್ಮ ಅಭ್ಯರ್ಥಿಯನ್ನು ಸೋಲಿಸಲು ಅವರು ಎಷ್ಟು ಪ್ರಯತ್ನಿಸುತ್ತಾರೆ ಎಂದು ನೋಡೋಣ, ಕಾಂಗ್ರೆಸ್ ಗೆ ಬಿಟ್ಟುಕೊಟ್ಟ 20 ಕ್ಷೇತ್ರಗಳಲ್ಲಿ ನಾನು ಮತ್ತು ಜೆಡಿಎಸ್ ಕಾರ್ಯಕರ್ತರು ಈ ರೀತಿ ವರ್ತಿಸುವುದಿಲ್ಲ ಎಂದು ಮಂಡ್ಯದಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.