ನಮ್ಮೆಲ್ಲರ ದೂರವಾಣಿಯನ್ನು ಕದ್ದಾಲಿಕೆ ಮಾಡಲಾಗುತ್ತಿದೆ. ನಮ್ಮ ಪ್ರಚಾರ ಕಾರ್ಯ, ಚುನಾವಣಾ ತಂತ್ರಗಾರಿಕೆ, ಕಾರ್ಯಕರ್ತರ ಸಂಪರ್ಕಕ್ಕೆ ಅಡ್ಡಿಯನ್ನುಂಟುಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ನಾಮಪತ್ರ ಸಲ್ಲಿಸುವಾಗ ವಿದ್ಯುತ್ ಪ್ರಸರಣಕ್ಕೆ ಅಡ್ಡಿಯುಂಟು ಮಾಡಿದ್ದಾರೆ. ಮಂಡ್ಯದಲ್ಲಿಂದು ಮನೆಮನೆಗೆ ತೆರಳಿ ಪ್ರತಿ ಮತದಾರರಿಗೆ ಸಾವಿರಾರ ರೂಪಾಯಿ ಹಣ ಹಂಚುತ್ತಿದ್ದಾರೆ. ನಿಖಿಲ್ ಪ್ರಚಾರಕ್ಕಾಗಿ ಪ್ರತೀ ವ್ಯಕ್ತಿಗೆ 500 ರೂ ಹಣ, ಮಧ್ಯಾಹ್ನ ಊಟಕ್ಕೆ, ಪೆಟ್ರೋಲ್ ಖರ್ಚು ವೆಚ್ಚು ಕೊಡುವ ಕೆಲಸ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಅವರು ದೂರಿದರು.