ಬೆಂಗಳೂರು: ಲೋಕಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಜೆಡಿಎಸ್ ನಾಯಕರ, ಆಪ್ತರ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಐಟಿ ದಾಳಿಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಮೈತ್ರಿ ಸರ್ಕಾರದ ದೋಸ್ತಿ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ್ದರೆ, ಅತ್ತ ಮಾಜಿ ಸಿಎಂ ಹಾಗೂ ದೋಸ್ತಿ ಸರ್ಕಾಯ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಾತ್ರ ಐಪಿಎಲ್ ಪಂದ್ಯ ವೀಕ್ಷಣೆ ಮಾಡಿ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದರು.