ಐಟಿ ದಾಳಿ ರಾಜಕೀಯ ಪ್ರೇರಿತ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು!

ರಾಜ್ಯದಲ್ಲಿ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಆರೋಪಿಸಿರುವ ಕಾಂಗ್ರೆಸ್ ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಆರೋಪಿಸಿರುವ ಕಾಂಗ್ರೆಸ್ ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಜೆಡಿಎಸ್ ನಾಯಕರ ಮನೆ ಹಾಗೂ ಅವರ ಆಪ್ತರ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದ ದಾಳಿ ಕುರಿತು ಕೆಪಿಸಿಸಿ ಕೇಂದ್ರ ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿ ಭವನಕ್ಕೆ ದೂರು ನೀಡಿದೆ.  ಈ ಸಂಬಂಧ ರಾಜ್ಯದ ಮುಖ್ಯ ಚುನಾಣಾಧಿಕಾರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ದೂರು ನೀಡಿದ್ದು,. ಇದರ ಪ್ರತಿಯನ್ನು ರಾಷ್ಟ್ರಪತಿ ಭವನಕ್ಕೂ ಕಳುಹಿಸಲಾಗಿದೆ.
ದೂರಿನಲ್ಲಿ 'ರಾಜ್ಯದಲ್ಲಿ ಏಪ್ರಿಲ್‌ 18 ಮತ್ತು 23ರಂದು ಎರಡು ಹಂತದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಇಂಥಹ ಸಂದರ್ಭದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳನ್ನು ಗುರಿಯಾಗಿಸಿಕೊಂಡು ಮಾರ್ಚ್‌ 28ರಂದು ಐಟಿ ದಾಳಿ ನಡೆಸಲಾಗಿದೆ. ಜೆಡಿಎಸ್‌ ಸಚಿವರ ಸಂಬಂಧಿಗಳು ಹಾಗೂ ಕಾಂಗ್ರೆಸ್‌ ಬೆಂಬಲಿಗರ ನಿವಾಸದ ಮೇಲೆ ದಾಳಿಯಾಗಿದೆ. ರಾಮನಗರ, ಮಂಡ್ಯ, ಹಾಸನ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಈ ದಾಳಿಗಳಾಗಿವೆ. ಇದು ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಹಾಗಾಗಿ ಐಟಿ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು,' ಎಂದು ಒತ್ತಾಯಿಸಲಾಗಿದೆ.
'ನರೇಂದ್ರ ಮೋದಿ ಸರ್ಕಾರ ಮೊದಲಿನಿಂದಲೂ ಈ ರೀತಿ ಮಾಡುತ್ತಿದೆ. 2018ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲೂ ರಾಜಕೀಯ ವಿರೋಧಿಗಳ ವಿರುದ್ಧ ಇಂಥu ಅಸ್ತ್ರ ಪ್ರಯೋಗಿಸಿತ್ತು. ಶಿರಸಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕ್‌ ನಿವಾಸದ ಮೇಲೆ ಐಟಿ ದಾಳಿ ಮಾಡಿಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚನೆ ಬಳಿಕವೂ ಈ ಪ್ರವೃತ್ತಿ ಮುಂದುವರೆದಿದೆ. ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಲಾಗಿದೆ. ಈ ಮೂಲಕ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಯತ್ನಿಸುತ್ತಿದ್ದಾರೆ ಎಂದು ಗುಂಡೂರಾವ್ ತನ್ನ ದೂರಿನಲ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com