ಇದೇ ವೇಳೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಯಡಿಯೂರಪ್ಪ ಅವರು 1,800 ಕೋಟಿ ರೂ ಹಣವನ್ನು ಕೇಂದ್ರದ ನಾಯಕರುಗಳಿಗೆ ಸಂದಾಯ ಮಾಡಿದ್ದಾರೆ. ಅದೆಲ್ಲ ಎಲ್ಲಿಂದ ಬಂತು? ಅದೆಲ್ಲ ಯಾರಿಗೆ ಸೇರಿದ್ದು ಗೊತ್ತಾ? ಅದು ಕರ್ನಾಟಕದ ರೈತರ ಜೇಬಿಂದ ತೆಗೆದುಕೊಂಡ ಹಣ ಎಂದರು.