ಮೈತ್ರಿ ಮತಗಳು ಬಿಜೆಪಿ ಅಭ್ಯರ್ಥಿಗೆ ಹಾಕಿದ್ದಾರೆಂಬ ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎರಡೂ ಪಕ್ಷಗಳ ಒಳ ಜಗಳದಿಂದ ಮತಗಳು ಬಿಜೆಪಿ ಅಭ್ಯರ್ಥಿಗೆ ನೀಡಿರಬಹುದು. ಇದರಲ್ಲಿ ಬಿಜೆಪಿ ಪಾತ್ರ ಏನೂ ಇಲ್ಲ. ಸಚಿವ ಜಿ.ಟಿ.ದೇವೇಗೌಡ ಅವರು ಬಿಜೆಪಿ ಮತಗಳು ಮೈತ್ರಿ ಅಭ್ಯರ್ಥಿಗೆ ಹಂಚಿಕೆಯಾಗಿವೆ ಎಂದು ನೇರವಾಗಿ ಹೇಳುತ್ತಾರೆ. ಸಚಿವ ಸಾ.ರಾ.ಮಹೇಶ್ ಚುನಾವಣೆ ಫಲಿತಾಂಶದ ಮುನ್ನವೇ ತೊಂದರೆ ಆಗುತ್ತದೆ ಎನ್ನುತ್ತಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರು ಮೈಸೂರಿನಲ್ಲಿ ಪ್ರಚಾರ ಮಾಡಿದರೂ ಕಾರ್ಯಕರ್ತರು ಒಂದಾಗಿಲ್ಲ. ಮಂಡ್ಯ, ಹಾಸನ, ತುಮಕೂರಿನಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳುವ ಭಯ ಇದೆ. ಮೈತ್ರಿ ವಿಚಾರವಾಗಿಯೇ ಕಾಂಗ್ರೆಸ್ನಲ್ಲೆ ಇನ್ನೂ ಅಸಮಾಧಾನ ಇದೆ. ಈ ಎಲ್ಲಾ ಗೊಂದಲಗಳನ್ನು ಎರಡೂ ಪಕ್ಷಗಳ ನಾಯಕರೇ ಸೃಷ್ಟಿಸಿರುವುದು ಅದರಲ್ಲಿ ಬಿಜೆಪಿ ಪಾತ್ರವಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ವಿಶ್ಲೇಷಿಸಿದರು.