ಕರ್ನಾಟಕದಲ್ಲಿ ಜೆಡಿಎಸ್ಗೆ ಹೆಚ್ಚಿನ ಸ್ಥಾನಗಳನ್ನು ನೀಡದ ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ನಿರಾಶೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಈ ಬಗ್ಗೆ ಟ್ವೀಟ್ ಮಾಡಿ, ಕೃತಕವಾಗಿ ವಿನ್ಯಾಸಗೊಳಿಸಿದ ಅಥವಾ ತಯಾರಿಸಿದ ಮೋದಿ ಅಲೆಗಳ ಮೂಲಕ ಮೇ 23ರ ಫಲಿತಾಂಶದ ಬಳಿಕ ಸರ್ಕಾರ ರಚಿಸಲು ಸ್ಥಾನಗಳ ಕೊರತೆ ಉಂಟಾದಾಗ ಮುಂಚಿತವಾಗಿ ಪ್ರಾದೇಶಿಕ ಪಕ್ಷಗಳನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.