ಚುನಾವಣೆ ಫಲಿತಾಂಶ ಪ್ರಕಟವಾದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ರೋಷನ್ ಬೇಗ್ ಉತ್ತಮ ರೀತಿಯಲ್ಲಿ ಸಹಕಾರ ನೀಡಲಿಲ್ಲ ಎಂಬ ಆರೋಪ ಬೈಗುಳ ತಮ್ಮ ವಿರುದ್ಧ ಬರದಂತೆ ನೋಡಿಕೊಳ್ಳಲು ರೋಷನ್ ಬೇಗ್ ಈ ಅಸ್ತ್ರ ಬಳಸಲಾಗಿದೆ, ರಿಜ್ವಾನ್ ಹರ್ಷದ್ ಪರ ಬೇಗ್ ಕೆಲಸ ಮಾಡಿಲ್ಲ, ಫಲಿತಾಂಶ ಪ್ರಕಟವಾದ ನಂತರ ಈ ಬಗ್ಗೆ ಕಾಂಗ್ರೆಸ್ ನಾಯಕರು ಪ್ರಶ್ನೆ ಮಾಡುತ್ತಾರೆ, ಅದಕ್ಕೆ ತಮ್ಮ ಬಳಿ ಉತ್ತರವಿಲ್ಲ, ಅದಕ್ಕಾಗಿ ಚುನಾವಣೋತ್ತರ ಸಮೀಕ್ಷೆಯನ್ನು ದಾಳವಾಗಿ ಬೇಗ್ ಬಳಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ಶಾಸಕರೊಬ್ಬರು ತಿಳಿಸಿದ್ದಾರೆ.