ಮತ ಎಣಿಕೆ ಆರಂಭ: ನಿಖಿಲ್, ಸುಮಲತಾ ನಡುವೆ ಹಾವು ಏಣಿ ಆಟ; ಸುಮಲತಾ ಚಾಮುಂಡೇಶ್ವರಿ ಮೊರೆ!

ಲೋಕಸಭೆ ಚುನಾವಣೆ ಮುಕ್ತಾಯ ಬಳಿಕ ಇಂದು ಮತ ಎಣಿಕೆ ಆರಂಭವಾಗಿದ್ದು ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಹಾಗೂ ಸುಮಲತಾ ಅಂಬರೀಶ್ ನಡುವೆ...
ನಿಖಿಲ್-ಸುಮಲತಾ
ನಿಖಿಲ್-ಸುಮಲತಾ
Updated on
ಮಂಡ್ಯ: ಲೋಕಸಭೆ ಚುನಾವಣೆ ಮುಕ್ತಾಯ ಬಳಿಕ ಇಂದು ಮತ ಎಣಿಕೆ ಆರಂಭವಾಗಿದ್ದು ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಹಾಗೂ ಸುಮಲತಾ ಅಂಬರೀಶ್ ನಡುವೆ ಹಾವು ಏಣಿ ಆಟ ಶುರುವಾಗಿದ್ದು ಸುಮಲತಾ ಅವರು ಚಾಮುಂಡೇಶ್ವರಿ ಮೊರೆ ಹೋಗಲಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ 10 ಗಂಟೆಗೆ ತೆರಳಲಿರುವ ಸುಮಲತಾ ಅಂಬರೀಶ್ ಅವರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ತಮ್ಮ ಬೆಂಬಲಿಗರ ಸೂಚನೆ ಮೇರೆಗೆ ಮಂಡ್ಯಕ್ಕೆ ಆಗಮಿಸಲಿದ್ದಾರೆ.
ಸುಮಲತಾ ಅಂಬರೀಶ್ ಅವರ ಗೆಲುವು ಖಚಿತವಾದರೇ ನಟರಾದ ದರ್ಶನ್ ಮತ್ತು ಯಶ್ ಕೂಡ ಮಂಡ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ.
ಇನ್ನು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಸಹ ಬೆಳಗ್ಗೆ 5 ಗಂಟೆಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com