ನಾನು ಚಿತ್ರರಂಗಕ್ಕೆ ಬಂದಾಗ, ಯಾರೂ ನಮ್ಮನ್ನು ಗುರುತಿಸುತ್ತಿರಲಿಲ್ಲ, ಆದರೂ ಅಂಬರೀಶ್ ಅಣ್ಣ ಗೌರವ ಕೊಟ್ಟು ನಮ್ಮ ಬೆನ್ನು ತಟ್ಟಿದ್ದಾರೆ. ನಮಗೆ ಮಾತ್ರವಲ್ಲ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಅದನ್ನು ನೆನಪಿಸಿಕೊಂಡು ನಾನು ಇಂದು ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದರು. ನಂಬರ್ 20 ಕಹಳೆ ಊದುತ್ತಿರುವ ರೈತನ ಗುರುತಿಗೆ ವೋಟ್ ಹಾಕಿ ಎಂದು ಕೈ ಮುಗಿದು ಮತದಾರರ ಬಳಿ ಯಶ್ ಮನವಿ ಮಾಡಿಕೊಂಡರು.