ದೇಶದಲ್ಲಿ ಉಗ್ರವಾದವನ್ನು ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಕಾಂಗ್ರೆಸ್ ನಾಯಕರಿಗೆ ದೇವೇಗೌಡರು ಸಹಕರಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿಕೆಗೆ ನಗರದಲ್ಲಿಂದು ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಾಗಲಿ ಅಥವಾ ಇತರೆ ಬೇರೆ ಯಾವುದೇ ನಾಯಕರಾಗಲಿ ಉಗ್ರವಾದಕ್ಕೆ ಬೆಂಬಲ ಕೊಡುತ್ತಿಲ್ಲ. ಯಾವುದೇ ಉಗ್ರರ ಪರವಾಗಿಯೂ ಕಾಂಗ್ರೆಸ್ ಸಹಕರಿಸಿಲ್ಲ. ಈ ರೀತಿಯಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವುದು ಪ್ರಧಾನಿ ಹುದ್ದೆಯಲ್ಲಿರುವ ಮೋದಿ ಅವರಿಗೆ ಶೋಭೆ ತರುವುದಿಲ್ಲ. ಪ್ರಧಾನಿ ಹುದ್ದೆಯಲ್ಲಿರುವ ಮೋದಿ ಒಬ್ಬ ಸುಳ್ಳುಗಾರ ಎಂದರು.