ತೇಜಸ್ವಿನಿ ಅವರಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್ ನೀಡುವ ನಿರೀಕ್ಷೆ ಇತ್ತು. ಆದರೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿ ಆ ಕ್ಷೇತ್ರದಿಂದ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಲಾಗಿತ್ತು. ಈ ಬಗ್ಗೆ ಕಾರ್ಯಕರ್ತರು, ಅನಂತ್ ಕುಮಾರ್, ತೇಜಸ್ವಿನಿ ಅನಂತ್ ಕುಮಾರ್ ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಉಪಾಧ್ಯಕ್ಷರ ಹುದ್ದೆಯನ್ನು ನೀಡಿ ಭಿನ್ನಮತ ಶಮನಕ್ಕೆ ಮುಂದಾಗಿದೆ.