ಸಿದ್ದರಾಮಯ್ಯ ಸೋಲಿಗೆ ಜನರೇ ಕಾರಣ ಹೊರತು ಜಿ ಟಿ ದೇವೇಗೌಡ ಅಲ್ಲ: ಹೆಚ್ ಡಿ ದೇವೇಗೌಡ

ಮೈಸೂರಿನಲ್ಲಿ ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಸೋಲಿಗೆ ಅಲ್ಲಿನ ಜನರು ...
ಹೆಚ್ ಡಿ ದೇವೇಗೌಡ
ಹೆಚ್ ಡಿ ದೇವೇಗೌಡ
ಹಾಸನ: ಮೈಸೂರಿನಲ್ಲಿ ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಸೋಲಿಗೆ ಅಲ್ಲಿನ ಜನರು ಕಾರಣವೇ ಹೊರತು ಜೆಡಿಎಸ್ ಆಗಲಿ, ಜಿ.ಟಿ. ದೇವೇಗೌಡರಾಗಲಿ ಕಾರಣವಲ್ಲ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಚುನಾವಣೆಯಲ್ಲಿ ಸೋತಿದ್ದೇನೆ. ಅವತ್ತಿನ ರಾಜಕೀಯ ಸನ್ನಿವೇಶದಲ್ಲಿ ಜನತಾದಳದಲ್ಲಿ ಜೆ ಹೆಚ್ ಪಟೇಲರು ಹಿರಿಯ ನಾಯಕರಿದ್ದರು, ಡೆಪ್ಯುಟಿ ಸಿಎಂ ಆಗಿದ್ದರು, ಅವರನ್ನು ಮುಖ್ಯಮಂತ್ರಿಯಾಗಿ ಮಾಡುವುದು ಒಳ್ಳೆಯದು ಎಂದು ತೀರ್ಮಾನಿಸಿ ಸಿದ್ದರಾಮಯ್ಯನವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಲಾಯಿತು.
ಅವರಿಗೆ ಮುಖ್ಯಮಂತ್ರಿಯಾಗಲಿಲ್ಲ ಎಂಬ ನೋವಿದ್ದಿರಬಹುದು. ಮುಂದೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಹೋದರು. ಮುಖ್ಯಮಂತ್ರಿಯಾಗಿ 5 ವರ್ಷ ಅಧಿಕಾರ ನಡೆಸಿದರು.
ಈ ಮಧ್ಯೆದಲ್ಲಿ ಎಸ್ ಎಂ ಕೃಷ್ಣ ಅವರ ಪಾತ್ರವೇನು ಎಲ್ಲ ನನಗೆ ಗೊತ್ತಿದೆ. ಈಗ ನನಗೆ ಅಗ್ನಿಪರೀಕ್ಷೆ. ಸಿದ್ದರಾಮಯ್ಯನವರನ್ನು ಕಳೆದ ಬಾರಿ ಮೈಸೂರಿನಲ್ಲಿ ಸೋಲಿಸಿದ್ದು ಅವರಿಗೆ ತುಂಬಾ ನೋವಿದೆ, ಅದು ನನಗೆ ಅರ್ಥವಾಗುತ್ತದೆ. ನಾನು ಚುನಾವಣೆ ಪ್ರಚಾರಕ್ಕೆ ಹೋಗಲಿಲ್ಲ. ಅವರ ಸೋಲಿಗೆ ಜಿ ಟಿ ದೇವೇಗೌಡ ಕಾರಣವಲ್ಲ, ಜನ ಕೊಟ್ಟ ತೀರ್ಮಾನ ಈ ವಿಷಯದಲ್ಲಿ ನಾನು ಯಾರನ್ನೂ ನಿಂದನೆ ಮಾಡಲು ಹೋಗುವುದಿಲ್ಲ ಎಂದು ದೇವೇಗೌಡ ಮಾರ್ಮಿಕವಾಗಿ ಮಾತನಾಡಿದರು.
ಮೈತ್ರಿ ಪಕ್ಷದಲ್ಲಿ ಒಡಕಿಲ್ಲವೇ? ಎಂದು ನೀವು ಪ್ರಶ್ನಿಸಬಹುದು. ಈಗಾಗಲೇ ಸಿದ್ದರಾಮಯ್ಯನವರೇ ಒಡಕು ಸರಿ ಮಾಡುತ್ತೇವೆ ಅಂತ ಹೇಳಿದ್ದಾರೆ. ಸದ್ಯಕ್ಕೆ ಲೋಕಸಭಾ ಚುನಾವಣೆಯತ್ತ ನಮ್ಮೆಲ್ಲರ ಗಮನವಿದೆ. ಬಿಜೆಪಿಯನ್ನು ಸೋಲಿಸುವುದು ನಮ್ಮ ಗುರಿ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com