ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಚುನಾವಣೆಯಲ್ಲಿ ಸೋತಿದ್ದೇನೆ. ಅವತ್ತಿನ ರಾಜಕೀಯ ಸನ್ನಿವೇಶದಲ್ಲಿ ಜನತಾದಳದಲ್ಲಿ ಜೆ ಹೆಚ್ ಪಟೇಲರು ಹಿರಿಯ ನಾಯಕರಿದ್ದರು, ಡೆಪ್ಯುಟಿ ಸಿಎಂ ಆಗಿದ್ದರು, ಅವರನ್ನು ಮುಖ್ಯಮಂತ್ರಿಯಾಗಿ ಮಾಡುವುದು ಒಳ್ಳೆಯದು ಎಂದು ತೀರ್ಮಾನಿಸಿ ಸಿದ್ದರಾಮಯ್ಯನವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಲಾಯಿತು.