ಬೆಂಗಳೂರು: ಕಾಂಗ್ರೆಸ್ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ. ಇದಕ್ಕೆ ಅವರ ಚುನಾವಣಾ ಪ್ರಣಾಳಿಕೆಯೇ ಸಾಕ್ಷಿ. ದೇಶದಲ್ಲಿದ್ದು ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುವವರು, ಪಾಕಿಸ್ತಾನಕ್ಕೆ ಮಾಹಿತಿ ಕೊಡುವವರನ್ನು ಪೊಲೀಸರು ಬಂಧಿಸಲು ದೇಶದ್ರೋಹ ಕಾಯ್ದೆ ಅಸ್ತ್ರವಾಗಿದೆ, ಆದರೆ ಇದಕ್ಕೆ ತಿದ್ದು ಪಡಿ ತರುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ ಎಂದು ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡ ಆರ್, ಅಶೋಕ್ ವಾಗ್ದಾಳಿ ನಡೆಸಿದ್ದಾರೆ.