ನಿನ್ನೆ ಅವರು ಕಾರವಾರಕ್ಕೆ ಜೆಡಿಎಸ್ ಅಭ್ಯರ್ಥಿ ಆನಂದ್ ಆಸ್ನೋಟಿಕರ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರ ಕಾರನ್ನು ಗೋಕರ್ಣ ಮತ್ತು ಕಾರವಾರ ಮಧ್ಯೆ ಎರಡು ಬಾರಿ ತಪಾಸಣೆ ನಡೆಸಲಾಗಿತ್ತು. ತಮ್ಮ ವಾಹನವನ್ನು ಪದೇ ಪದೇ ಏಕೆ ತಪಾಸಣೆ ಮಾಡುತ್ತಿದ್ದಾರೆ ಎಂದು ಕೇಳಿದ್ದಕ್ಕೆ ಚುನಾವಣಾ ಆಯೋಗದಿಂದ ಅಧಿಕಾರಿಗಳಿಗೆ ವಾಹನ ತಪಾಸಣೆ ಮಾಡುವಂತೆ ಆದೇಶ ಬಂದಿರಬೇಕು ಎನ್ನುತ್ತಾರೆ ಸಿಎಂ ಕುಮಾರಸ್ವಾಮಿ.