ಇದೀಗ ಕುಮಾರಸ್ವಾಮಿ ಅವರ ಹೇಳಿಕೆಗೆ ಇಂದು ಮಂಡ್ಯದಲ್ಲಿ ಭರ್ಜರಿ ತಿರುಗೇಟು ನೀಡಿರುವ ಸುಮಲತಾ ಅಂಬರೀಶ್ ಅವರು, 'ಮೊದಲು ಬಿಜೆಪಿ, ಈಗ ಕಾಂಗ್ರೆಸ್, ಮುಂದೆ ನನ್ನ ಜೆಡಿಎಸ್ ಅಭ್ಯರ್ಥಿ ಎಂದ್ರು ಅಚ್ಚರಿಯಿಲ್ಲ. ನಾನು ಮಂಡ್ಯ ಜನರಿಗಾಗಿಯೇ ಸ್ಪರ್ಧೆ ಮಾಡಿದ್ದೇನೆ. ಅವರು ಹೇಳಿದಂತೆಯೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ. ಚುನಾವಣೆ ಮುಗಿದ ಕೂಡಲೇ ನಾನು ಬಿಜೆಪಿ ಸೇರುತ್ತೇನೆ, ಮಂಡ್ಯ ಬಿಟ್ಟು ಹೋಗುತ್ತೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ. ಇದಕ್ಕೆಲ್ಲಾ ನಾವು ಕಿವಿಗೊಡಬಾರದು. ಚುನಾವಣೆಯಲ್ಲಿ ಈ ಎಲ್ಲಾ ಪ್ರಶ್ನೆಗಳಿಗೆ ಜನರೇ ನನ್ನ ಪರವಾಗಿ ಉತ್ತರ ನೀಡಲಿದ್ದಾರೆ ಎಂದು ಅಂಬರೀಶ್ ಪತ್ನಿ ವಿಶ್ವಾಸ ವ್ಯಕ್ತಪಡಿಸಿದರು' ಎಂದು ಸ್ಪಷ್ಟಪಡಿಸಿದ್ಧಾರೆ.