ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದವರನ್ನು ನಿರ್ಲಕ್ಷಿಸಿ ಇದೀಗ ಹೆಲಿಕಾಪ್ಟರ್ನಲ್ಲಿ ಬಂದವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರಿಗೆ ಕೊಟ್ಟಿರುವ ಕುರಿತು ಪ್ರಸ್ತಾಪಿಸಿದಾಗ, ಬಿಜೆಪಿ ಯುವಕರನ್ನು ಬೆಳೆಸಲು ಮುಂದಾಗಿದೆ. ನಳೀನ್ ಕುಮಾರ್ ಕಟೀಲು ಈ ಪ್ರಯೋಗದ ಮೊದಲ ವ್ಯಕ್ತಿ. ನಂತರ ಪ್ರತಾಪ್ ಸಿಂಹ. ಈಗ ತೇಜಸ್ವಿ ಸೂರ್ಯ. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ನಿಶ್ಚಿತವಾಗಿ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ. ಅವರನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ತಾವೇ ಹೊತ್ತಿರುವುದಾಗಿ ತಿಳಿಸಿದರು.