ಜಿಎಸ್ಟಿ ಕಾಂಗ್ರೆಸ್ನ ಯೋಜನೆಯಾಗಿದ್ದರೂ ಬಿಜೆಪಿ ಅದನ್ನು ಅಸಮರ್ಪಕ ರೀತಿಯಲ್ಲಿ ಜಾರಿಗೊಳಿಸಿದ್ದರಿಂದ ದೇಶದ ಕೋಟ್ಯಂತರ ವ್ಯಾಪಾರಿಗಳು, ಉದ್ಯಮಿಗಳಿಗೆ ತೊಂದರೆಯಾಗಿದೆ. ನೋಟು ಅಮಾನ್ಯೀಕರಣದಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಈಗಲೂ ಅದರ ಪರಿಣಾಮ ಕಂಡುಬರುತ್ತಿದೆ. ಕಾಂಗ್ರೆಸ್ನ ಪ್ರಣಾಳಿಕೆ ಬಿಜೆಪಿಯ ಪ್ರಣಾಳಿಕೆಯಂತೆ ಕೇವಲ ಕಾಗದದ ತುಂಡಲ್ಲ. ಜನರ ಬದುಕನ್ನು ಹಸನುಗೊಳಿಸುವ ಮಹತ್ತರ ಯೋಜನೆಗಳನ್ನು ಹೊಂದಿರುವ ವಾಗ್ದಾನವಾಗಿದೆ ಎಂದು ಹೇಳಿದ ಅವರು, ಕಾಂಗ್ರೆಸ್ ಪ್ರಣಾಳಿಕೆ ಜನಸಾಮಾನ್ಯರ ಅಭಿವೃದ್ಧಿ, ದೇಶದ ಪ್ರಗತಿ, ಜಾತ್ಯತೀತ, ಉದ್ಯೋಗ, ಗಡಿ, ಸೈನ್ಯ, ದೇಶರಕ್ಷಣೆ ಸೇರಿದಂತೆ ಸಮಗ್ರ ಅಂಶಗಳನ್ನು ಒಳಗೊಂಡ ಪ್ರಣಾಳಿಕೆಯಾಗಿದೆ ಎಂದು ಸ್ವಪಕ್ಷದ ಪ್ರಣಾಳಿಕೆಯನ್ನು ಸಮರ್ಥಿಸಿಕೊಂಡರು.