ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ದೇಶದ 21 ಜಾತ್ಯಾತೀತ ನಾಯಕರು ಭಾಗವಹಿಸಿದ್ದರು ಆ ಮೂಲಕ ನಮ್ಮ ಶಕ್ತಿ ಪ್ರದರ್ಶಿಸಿದ್ದರು. ಅದಾದ ನಂತರ 13 ಉಪ ಚುನಾವಣೆಗಳು ನಡೆದವು, ಅದರಲ್ಲಿ ಬಿಜೆಪಿ 12ರಲ್ಲಿ ಸೋತಿದೆ, ಒಂದೇ ವೇದಿಕೆಯಲ್ಲಿ ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಿದ್ದೇ ಇದಕ್ಕೆ ಉತ್ತಮ ಉದಾಹರಣೆ ಎಂದು ದೇವೇಗೌಡ ಹೇಳಿದ್ದಾರೆ.