ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು, 'ಮೋದಿ ಹಿಟ್ಲರ್ ಇದ್ದಂತೆ, ದೇಶವನ್ನ ಹಾಳು ಮಾಡ್ತಾನೆ. ಡಿಕ್ಟೇಟರ್ ಕ್ಕಿಂತ ಕೆಟ್ಟವನು. ಶ್ರೀಕಾಂತ್ ಎಂಬಾತ ನನ್ನ ಮನೆಗೆ ಬಂದು ಹೋದಾಗ, 30 ಜನ ಐಟಿ ಅವ್ರ ಅವ್ರನ್ನ ತಪಾಸಣೆ ಮಾಡಿದ್ರು. ಫೋನ್ ಚೆಕ್ ಮಾಡಿದರು. ಇದೆಲ್ಲಾ ಯಾಕೆ? ಎಂದು ಪ್ರಶ್ನೆ ಮಾಡಿದರು.ಯುವಕರನ್ನು ದಾರಿ ತಪ್ಪಿಸುವ ಕೆಲಸ ದೇಶದಲ್ಲಿ ನಡೆಯುತ್ತಿದೆ. ಮೋದಿ, ಬಿಜೆಪಿ ನಾಯಕರು ಯಾವ ಸಾಧನೆ ಮಾಡಿಲ್ಲ. ದೇಶದ ರಕ್ಷಣೆಯಲ್ಲಿ ಮೋದಿ ಓಟ್ ಕೇಳ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲೂ ದೇಶದಲ್ಲಿ ರಕ್ಷಣೆ ಇತ್ತು. ನಾನು ಪುಲ್ವಾಮ ದಾಳಿ ಬಗ್ಗೆ ಮಾಜಿ ಯೋಧ ಹೇಳಿದ್ದನ್ನ ನಾನು ಹೇಳಿದ್ದೆ. ಆದರೆ ನನ್ನ ಭಾಷಣ ತಿರುಚಿ ಮಾಧ್ಯಮಗಳು ಪ್ರಸಾರ ಮಾಡಿದವು. ನೀವು ಬೇಕಾದ್ರೆ ನನ್ನ ಭಾಷಣ ಕೇಳಿ ನಿಮಗೆ ಗೊತ್ತಾಗುತ್ತೆ ಎಂದು ಮಾಧ್ಯಮಗಳ ಮೇಲೂ ಸಿಎಂ ಕೆಂಡಕಾರಿದರು.