ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಮಾತನಾಡಿ, 20 ವರ್ಷಗಳ ಹಿಂದೆ ಸೂರನಹಳ್ಳಿಯ ರೈತರ ಜಮೀನನ್ನು ವಶಪಡಿಸಿಕೊಳ್ಳಲಾಗಿದೆ. ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಕಸಬಾ ಹೋಬಳಿಯಲ್ಲಿ 400 ಎಕರೆ ವಶಪಡಿಸಿಕೊಂಡಿದ್ದಾರೆ. ಇವರ ವಿರುದ್ಧ ರಾಜಕಾರಣ ಮಾಡುವವರ ಜಮೀನು ವಶಪಡಿಸಿಕೊಳ್ಳುವುದು, ಹಿಂಸೆ ನೀಡುವ ಪ್ರವೃತ್ತಿ ಸಚಿವ ರೇವಣ್ಣ ನಡೆಸಿಕೊಂಡು ಬಂದಿದ್ದಾರೆ. ಆದರೆ ಇನ್ನು ಮುಂದೆ ಇಂತಹ ಆಟಗಳು ನಡೆಯುವುದಿಲ್ಲ. ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳಿಗೆ ನಿಮ್ಮ ಕುಟುಂಬಕ್ಕೆ ಸೀಮಿತವೇ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಬೇರೆ ಯಾರೂ ಒಕ್ಕಲಿಗರು ಇಲ್ಲವೇ ಎಂದು ಟೀಕಿಸಿದರು.