ಐಟಿ ದಾಳಿ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಿಜ್ವಾನ್ ಅರ್ಷದ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಪಿ.ಸಿ.ಮೋಹನ್ ಅವರ ಸಾಧನೆ ಶೂನ್ಯ. ಹೀಗಾಗಿ ಕ್ಷೇತ್ರದಲ್ಲಿ ಅವರ ವಿರುದ್ಧದ ಅಲೆ ಇದೆ. ಬೆಂಗಳೂರಿನ ಮೂರೂ ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಸೋಲಿನ ಭೀತಿ ಎದುರಾಗಿದೆ. ಚುನಾವಣಾ ಪ್ರಚಾರದಿಂದ ಹಿಂದೆ ಸರಿಯುವಂತೆ ಮಾಡಲು, ಮುಜಗರ ಸೃಷ್ಟಿಸಲು ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡು ಐಟಿ ದಾಳಿ ನಡೆಸಲಾಗಿದೆ. 15-20 ವ್ಯಕ್ತಿಗಳ ಮೇಲೆ ಐಟಿ ದಾಳಿ ನಡೆಸಲಾಗಿದ್ದು, ತಮಗೆ ಪರಿಚಯವೇ ಇಲ್ಲದ 8-10 ವ್ಯಕ್ತಿಗಳ ಮೇಲೆ ಐಟಿ ದಾಳಿ ನಡೆಸಲಾಗಿದೆ. ಎಂದು ಅವರು ಆರೋಪಿಸಿದರು.