ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ವಿಧಾನಪರಿಷತ್ ಸಭಾಪತಿ ವಿ ಆರ್ ಸುದರ್ಶನ್ ಹೇಳಿದ್ದಾರೆ. ಚಿತ್ರದುರ್ಗ ಮತ್ತು ಮಹಾರಾಷ್ಟ್ರದ ಲಾತೂರ್ ನಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಮೋದಿಯವರು ಈ ಬಾರಿ ಮೊದಲ ಸಲ ಮತದಾನ ಮಾಡುತ್ತಿರುವವರು ತಮ್ಮ ಮತವನ್ನು ಬಾಲಾಕೋಟ್ ನಲ್ಲಿ ವಾಯುದಾಳಿ ನಡೆಸಿದ ಸೇನಾಪಡೆಗೆ ಮತ್ತು ಪುಲ್ವಾಮಾದಲ್ಲಿ ಹುತಾತ್ಮರಾದ ಸೈನಿಕರಿಗೆ ಅರ್ಪಿಸಿ ಎಂದು ಕರೆ ನೀಡಿದ್ದಾರೆ.ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.