ಕೊಪ್ಪಳದಲ್ಲಿ ನಡದೆ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ಹಿಂದಿನ ಕಾಂಗ್ರೆಸ್ ಸರ್ಕಾರ 10 ಪರ್ಸೆಂಟ್ ಸರ್ಕಾರವಾಗಿತ್ತು. ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಸೇರಿ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿದ್ದು ಇದೀಗ 20 ಪರ್ಸೆಂಟ್ ಸರ್ಕಾರ ನಡೆಯುತ್ತಿದೆ. ಇವರ ಆಲೋಚನೆ ಬರೀ ಕಮಿಷನ್ ಮಾಡುವುದರಲ್ಲಿ ನಿರತವಾಗಿದೆ ಎಂದರು.