ಈ ಚುನಾವಣೆ ನ್ಯಾಯ, ಅನ್ಯಾಯದ ನಡುವಿನ ಹೋರಾಟ- ರಾಹುಲ್ ಗಾಂಧಿ

ಈ ಬಾರಿಯ ಲೋಕಸಭಾ ಚುನಾವಣೆ ನ್ಯಾಯ ಮತ್ತು ಅನ್ಯಾಯ ಹಾಗೂ ಸತ್ಯ, ಅಸತ್ಯ ನಡುವಿನ ಹೋರಾಟವಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆ ನ್ಯಾಯ ಮತ್ತು ಅನ್ಯಾಯ ಹಾಗೂ ಸತ್ಯ, ಅಸತ್ಯ ನಡುವಿನ ಹೋರಾಟವಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕೆಆರ್ ನಗರದ ಮೈದಾನದಲ್ಲಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಹಾಗೂ ಜೆಡಿಎಸ್  ಒಗ್ಗೂಡಿ ಆರ್ ಎಸ್ ಎಸ್ , ಬಿಜೆಪಿ ವಿರುದ್ಧ ಹೋರಾಟ ಮುಂದುವರೆಸುವುದಾಗಿ ಹೇಳಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಣ ಹಾಕುತ್ತೇನೆ ಎಂದಿದ್ದರು. ಆದರೆ, ಗೆದ್ದ ಬಳಿಕ ಹೇಳಿದಂತೆ ನಡೆದುಕೊಳ್ಳಲಿಲ್ಲ, ನೋಟ್ ರದ್ದತಿ ಮೂಲಕ ಬಡವರು, ದುರ್ಬಲರು, ಸಣ್ಣ ವ್ಯಾಪಾರಿಗಳನ್ನು ಬೀದಿಗೆ ತಳ್ಳಿದರು ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com