ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿಗಳ ಮುನಿಸಿನ ವಿಚಾರ ಈಗಾಗಲೇ ಬಹಿರಂಗಗೊಂಡಿದೆ. ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಪರ ಜೆಡಿಎಸ್ ನಾಯಕರು ಪ್ರಚಾರದಲ್ಲಿ ಭಾಗಿಯಾಗದಿರುವ ಬಗ್ಗೆ ಸಮಾವೇಶದಲ್ಲಿ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. 'ಈ ಮೈತ್ರಿ ಸರ್ಕಾರದಲ್ಲಿ ನಾನು ಮಂತ್ರಿಯಲ್ಲ, ಮುಖ್ಯಮಂತ್ರಿ ಆಗಿರುವುದು ಕುಮಾರಸ್ವಾಮಿ. ಮಂತ್ರಿ ಆಗಿರುವುದು ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್. ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬಾರದು. ಮೈತ್ರಿ ಅಭ್ಯರ್ಥಿಗಳು ಗೆಲ್ಲಲೇಬೇಕು, ನಾವು ಗೆಲ್ಲಬೇಕು. ನಾವು ಸೋತರೆ ಸರ್ಕಾರ ಇರುತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.