ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಹೇಳಲಿ,ಒಂದು ಲೋಟ ಹಾಲು ಕರೆದು ತೋರಿಸಲಿ- ಸಿಎಂ,ನಿಖಿಲ್ ಗೆ ದರ್ಶನ್ ಸವಾಲು

ಸಕ್ಕರೆ ನಾಡು ಮಂಡ್ಯದಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಪರ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.
ನಟ ದರ್ಶನ್
ನಟ ದರ್ಶನ್
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಪರ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್‌  ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.
ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರು  ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಹೇಳಲಿ, ಒಂದು ಲೋಟ ಹಾಲು ಕರೆದು ತೋರಿಸಲಿ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್  ಸವಾಲು ಹಾಕಿದರು
ಸಿನಿಮಾದವರು ಸಿನಿಮಾದವರು ಎನ್ನುತ್ತಾರಲ್ಲ, ಅವರು ನಿರ್ಮಾಪಕರಲ್ವಾ. ಅವರ ಮಗನಿಗಾಗಿ 60 ಕೋಟಿ ರೂ. ಹಾಕಿ ಸಿನಿಮಾ ಮಾಡಿದ್ದು ಸುಳ್ಳಾ. ಅದೇ ದುಡ್ಡನ್ನು ಮಂಡ್ಯದಲ್ಲಿ ವೃದ್ದಾಶ್ರಮ, ಅನಾಥಶ್ರಮ ಮಾಡಿದ್ದರೆ ಪ್ರಚಾರಕ್ಕೆ ಬರುವ ಆಗಿರಲಿಲ್ಲ.  ಆಗ ಬಂದು ಅವರು ವೋಟು ಕೇಳಿದ್ದರೆ ನ್ಯಾಯ ಇರುತ್ತಿತ್ತು ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
ಕೆಲವೇ ಮಂದಿ  ಡಿ ಬಾಸ್ ಅಂತಾ ಕರೆಯುತ್ತಿದ್ದರು. ಈಗ ಮುಖ್ಯಮಂತ್ರಿಯಿಂದಾಗಿ ಆ ಹೆಸರು ಕರ್ನಾಟಕದ ಉದ್ದಕ್ಕೂ ಖ್ಯಾತಿಯಾಗಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತುಂಬಾ ಥ್ಯಾಂಕ್ಸ್ ಹೇಳುವುದಾಗಿ ದರ್ಶನ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com